ತುಂಬಾ ಉತ್ತಮ ಮಾಹಿತಿ ಸರ್ ಧನ್ಯವಾದಗಳು

On Mon, Oct 2, 2017, 12:19 PM mahendra ks <[email protected]> wrote:

> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು
> ಅವರನ್ನೇ ಮೀರಿಸಿದ್ದರು. ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ
> ಹೊಟ್ಟೆಯಲ್ಲೇ ಕಿಚ್ಚು ಹೊತ್ತಿಕೊಂಡಿತ್ತು.
> ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ!
> ಹಾಗಂತ 1965, ಆಗಸ್ಟ್ 15ರಂದು ಕೆಂಪುಕೋಟೆಯ ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್
> ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು. ಜತೆಗೆ ದುರ್ಬಲ ಕಾಯದ ಈ
> ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ.
> ಇದಾಗಿ ಎರಡು ವಾರಗಳಾಗಿವೆಯಷ್ಟೆ.
> ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್
> ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ
> ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ
> ಶಾಸ್ತ್ರಿಯವರು '10 ಜನಪಥ್‌' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು.
> ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು
> ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್
> ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು. ಏನಿರಬಹುದು?
> ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು.
> ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ
> ಕೈಗೊಂಡಿದ್ದರು.
> ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು.
> ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ ಪಡೆಗಳು
> ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ ಮುಗಿಬಿದ್ದಿದ್ದವು.
> ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ
> ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು
> ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು
> ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ.
> ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು
> ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು
> ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ
> ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ
> ಬಿಟ್ಟರು!
> ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ ಸಂಘರ್ಷ ಅದಾಗಿತ್ತು. ಏಕೆಂದರೆ ಎರಡೂ
> ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು.
> ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್
> ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ
> ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು.
> ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್
> ಉತ್ತರ್‌' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97
> ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ
> ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ
> ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ
> ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು.
> ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ
> ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು
> ಪ್ರಧಾನಿಯಾಗಿದ್ದದ್ದು ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ 'ದೇಶಕ್ಕಾಗಿ
> ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ
> ಓಗೊಟ್ಟಿದ್ದರು.
> ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು.
> ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್
> 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು. ಅವುಗಳಲ್ಲಿ
> 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು ವಶಪಡಿಸಿಕೊಂಡಿದ್ದರು.
> ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು
> ಕೇವಲ 128 ಟ್ಯಾಂಕುಗಳು.
> ಇತ್ತ ಶಾಸ್ತ್ರಿಯವರ ಬಗ್ಗೆ ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ
> ಎತ್ತಲಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ, 1962ರಲ್ಲಿ ಚೀನಾ ಆಕ್ರಮಣ ಮಾಡಿದಾಗ ನೆಹರು ಬದಲು
> ಶಾಸ್ತ್ರೀಜಿ ಪ್ರಧಾನಿಯಾಗಿರಬೇಕಿತ್ತು ಎಂಬ ಭಾವನೆ ಜನಮನದಲ್ಲುಂಟಾಯಿತು.
> ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು. ರಣರಂಗದಲ್ಲಿ
> ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ
> ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು.
> ಮುಂದಿನದ್ದು ಮಹಾನ್ ದುರಂತ!
> ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್
> ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ
> ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ
> ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು.
> ಅಯೂಬ್‌ಖಾನ್ ಒಪ್ಪದೇ ಹೋದಾಗ,''Then you will have to find another PM'' (ಹಾಗಾದರೆ
> ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ ಹೊಡೆದಂತೆ
> ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ ತಾನೇ
> ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು.
> ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ
> ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು.
> ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು.
> ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು
> ಅವರನ್ನೇ ಮೀರಿಸಿದ್ದರು.
> ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ ಹೊಟ್ಟೆಯಲ್ಲೇ ಕಿಚ್ಚು
> ಹೊತ್ತಿಕೊಂಡಿತ್ತು. ಹಾಗಾಗಿ ಶಾಸ್ತ್ರಿಯವರ ದುರಂತಮಯ ಅಧ್ಯಾಯ ಸಾವಿನ ನಂತರವೂ
> ಮುಂದುವರಿಯಿತು.
> ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು!
> ಆದರೆ ಶವ ಪರೀಕ್ಷೆ ನಡೆಯಲಿಲ್ಲ
> ಕೆಲವು ಕೃತಘ್ನ ಭಾರತೀಯರೇ ಶಾಸ್ತ್ರಿಯವರನ್ನು ಇತಿಹಾಸದ ಕಸದ ತೊಟ್ಟಿಗೆ ದೂಡಿ ಕೈ
> ತೊಳೆದುಕೊಳ್ಳಲು ವ್ಯವಸ್ಥಿತ ಪಿತೂರಿ ನಡೆಸಿದ್ದರು. ಗಾಂಧೀಜಿ ಮತ್ತು ನೆಹರು ಅವರ ಅಂತ್ಯ
> ಸಂಸ್ಕಾರ ನಡೆದ ಸ್ಥಳದಲ್ಲಿ ಶಾಸ್ತ್ರಿಯವರ ಅಂತ್ಯ ಸಂಸ್ಕಾರ ನಡೆಸಲು ಅಡ್ಡಗಾಲು ಹಾಕಿ,
> ದೇಹವನ್ನು ಅಲಹಾಬಾದ್‌ಗೆ ಕೊಂಡೊಯ್ಯಲು ಹವಣಿಸಿದರು.
> ಮೊದಲೇ ನೊಂದಿದ್ದ ಪತ್ನಿ ಲಲಿತಾಶಾಸ್ತ್ರಿ ದೇಶದ ಜನರ ಮುಂದೆ ಬಣ್ಣ ಬಯಲು ಮಾಡುವ ಬೆದರಿಕೆ
> ಹಾಕಿದಾಗ ದಿಲ್ಲಿಯಲ್ಲೇ ಅಂತ್ಯಸಂಸ್ಕಾರ ನಡೆಸಲು ಅವಕಾಶ ಮಾಡಿಕೊಡಲಾಯಿತು. ಅಷ್ಟೇ ಅಲ್ಲ,
> ಶಾಸ್ತ್ರೀಜಿಯವರ ಸಮಾಧಿ ಮೇಲೆ ಅವರದ್ದೇ ಆದ 'ಜೈ ಜವಾನ್, ಜೈ ಕಿಸಾನ್‌' ಘೋಷಣೆಯನ್ನು
> ಕೆತ್ತುವುದಕ್ಕೂ ಅಡ್ಡಿಪಡಿಸಿದರು.
> ಮತ್ತೆ ಲಲಿತಾಶಾಸ್ತ್ರಿ ಉಪವಾಸ ಸತ್ಯಾಗ್ರಹ ಮಾಡುವೆನೆಂದು ಬೆದರಿಕೆಯೊಡ್ಡಬೇಕಾಗಿ ಬಂತು.
> ದುಃಖದಿಂದ ಹೊರಬರುವ ಮೊದಲೇ ಶಾಸ್ತ್ರೀಜಿ ಭಾವಚಿತ್ರ ಕಾಂಗ್ರೆಸ್ ಕಾರ್ಯಾಲಯದಿಂದಲೂ
> ಕಣ್ಮರೆಯಾಯಿತು. ಇಂದಿರಾಪ್ರೇರಿತ ಕಾಂಗ್ರೆಸ್ಸಿಗರ ಪಿತೂರಿ ಆ ಮಟ್ಟಿಗಿತ್ತು.
> 1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್ ಸರಾಯ್‌ನಲ್ಲಿ ಬಡ ಶಿಕ್ಷಕರ ಮಗನಾಗಿ
> ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ
> ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ ತಿಲಕ್ ಅವರಿಂದ ಪ್ರಭಾವಿತರಾಗಿದ್ದ
> ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು
> ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು.
> ಆದರೆ ಸ್ವಾತಂತ್ರ್ಯಾನಂತರ ಕೇಂದ್ರ ಸಚಿವರಾದ ಶಾಸ್ತ್ರಿಯವರ ಏಳಿಗೆಯನ್ನು ನೆಹರು
> ಸಹಿಸದಾದರು. ಅವರ ಅಸಹನೆ ಯಾವ ಮಟ್ಟಕ್ಕೆ ತಲುಪಿತೆಂದರೆ ಎಲ್ಲ ಖಾತೆಗಳನ್ನು ಕಿತ್ತುಕೊಂಡು
> 'ಖಾತೆ ರಹಿತ' ಮಂತ್ರಿಯಾಗಿಸಿ ಅವಮಾನವನ್ನೂ ಮಾಡಿದರು. ಎಲ್ಲಿ ಶಾಸ್ತ್ರಿಯವರು
> ಅಡ್ಡಗಾಲಾಗುತ್ತಾರೋ ಎಂಬ ಭಯದಿಂದ 'ನೆಹರು ನಂತರ ಯಾರು?' ಎಂಬ ಪ್ರಶ್ನೆಯನ್ನು ಸ್ವತಃ
> ಹುಟ್ಟು ಹಾಕಿ ತನ್ನ ಮಗಳು ಇಂದಿರಾ ಗಾಂಧಿಯವರನ್ನು ಉತ್ತರಾಧಿಕಾರಿಯಾಗಿ ಮಾಡಲು ಹವಣಿಸಿದರು.
> ಶಾಸ್ತ್ರಿಯವರ ನಿಗೂಢ ಮರಣದೊಂದಿಗೆ ನೆಹರು ಆಸೆ ಈಡೇರಿತು.
> ಇಂದಿರಾ ಪ್ರಧಾನಿಯಾದರು. ಭಾರತ ಮತ್ತೆ ನೆಹರು ಕುಟುಂಬಕ್ಕೆ ನೇಣು ಹಾಕಿಕೊಂಡಿತು.
> ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ
> ಪುತ್ರನನ್ನೇ ಮರೆಯುವಂತಾಯಿತು.
> ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ?
> ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್
> ಬಹಾದ್ದೂರ್ ಶಾಸ್ತ್ರಿಯವರನ್ನು
> ನಾವೂ ಮರೆಯುವುದು ಬೇಡ.
> -ಒಂದೇ ಭಾರತ ಶ್ರೇಷ್ಠ ಭಾರತ
> ‪#‎ಜೈ‬ ಹಿಂದ
> ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ.
> (ತಪ್ಪದೆ ಈ ಸಂದೇಶ ಶೇರ್ ಮಾಡಿ)
>
> ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ
> ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು.
>
> ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು
> ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು.
>
> ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ
> ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು
> ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು
> ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ
> ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ”
>
> “ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ
> ಪ್ರತಿಕ್ರಿಯೆ..!!
>
> “ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ
> ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ
> ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ.
>
> ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾರೆ..
>
> “ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು
> ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ
> ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ
> ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು
> ಎದುರಿಸಬೇಕಾಗಬಹುದು”
>
> ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ ಮಾಡಿದರು.ಲಕ್ಷಾಂತರ
> ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು
> ಉಪವಾಸವೃತವನ್ನು ಕೈಗೊಂಡರು.
>
> ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು
> ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ
> ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ
> ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು.
>
> “ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ
> ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ
> ನಿಭಾಯಿಸುತ್ತಿದ್ದರು.
>
> ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ
> ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್
> ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು
> ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು.
>
> ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ
> ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು
> ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು”
> ಎಂದಿದ್ದರು.
>
> ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ
> ಸರಳ,ಸಜ್ಜನ ಮಹಾಪುರುಷನನ್ನು ನಾವಂದು ಸ್ಮರಿಸಬೇಕಿದೆ.. Forward this guys  be proud
> about shastriji.
> ವಾಟ್ಸಪ್ ನಲ್ಲಿ ಬಂದ ಬರಹ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/kannadastf/CAMFR0u9v%2BqpbkD8Qm%2Bu%3Dhr0behywCe4ncCLneNv_V_eyg5qHhA%40mail.gmail.com.

Reply via email to